ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿರುವ ನಟ ಚೇತನ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಸಾರಿಗೆ ನೌಕರರ ಬೇಡಿಕೆ ಇಂದು ನಿನ್ನೆಯದಲ್ಲ.
16 ವರ್ಷಗಳಿಂದ ಬೇಡಿಕೆಯಿಟ್ಟು ಹೋರಾಟ ನಡೆಸುತ್ತಿದ್ದಾರೆ.
ನೌಕರರ 8 ಬೇಡಿಕೆ ಈಡೇರಿಸಿದ್ದೇವೆ ಎಂಬ ಸರ್ಕಾರದ ಹೇಳಿಕೆ ಸುಳ್ಳು.
ಸರ್ಕಾರ ಕರ್ತವ್ಯಕ್ಕೆ ಹಾಜರಾಗದ ನೌಕರರನ್ನು ವಜಾ ಮಾಡುತ್ತಿದೆ.
ಅನ್ಯಾಯದ ವಿರುದ್ಧ ಹೋರಾಟ ನಡೆಸಿದವರ ವಿರುದ್ಧ ಸರ್ಕಾರದ ಇಂಥ ದೋರಣೆ ಜನವಿರೋಧಿ'ಎಂದರು.
ಎಷ್ಟು ನೌಕರರನ್ನು ಜೈಲಿಗೆ
ಹಾಕುತ್ತೀರಿ: ಸಿದ್ದು ಕಿಡಿ
ಎಸ್ಮಾ ಜಾರಿ ಮಾಡಿ ಎಷ್ಟು ಮಂದಿ ನೌಕರರನ್ನು ಜೈಲಿಗೆ ಹಾಕುತ್ತೀರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಬೆಳಗಾವಿಯ ಬೈಲಹೊಂಗಲದಲ್ಲಿ ಮಾತನಾಡಿ, ಕಳೆದ 4 ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಸಾರ್ವಜನಿಕರು ಬಸ್ ಇಲ್ಲದೆ ಪರದಾಡುತ್ತಿದ್ದಾರೆ.
ಮುಷ್ಕರದ ನಡುವೆಯೂ ಓರ್ವ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರತಿಭಟನಾನಿರತರೊಂದಿಗೆ ಚರ್ಚಿಸಿ ಪರಿಹಾರ ಸೂಚಿಸುವುದನ್ನು ಬಿಟ್ಟು ಅವರನ್ನು ಹೆದರಿಸುತ್ತಿದ್ದೀರಾ ಎಂದು ಕಿಡಿಕಾರಿದ್ದಾರೆ.
0 ಕಾಮೆಂಟ್ಗಳು
hrithiksuraj2@gmail.com