ಮುಷ್ಕರ ನಿರತ ಸಾರಿಗೆ ನೌಕರರ ಬೆಂಬಲಕ್ಕೆ ನಿಂತ ಖ್ಯಾತ ನಟ! ಎಷ್ಟು ನೌಕರರನ್ನು ಜೈಲಿಗೆ ಹಾಕುತ್ತೀರಿ: ಸಿದ್ದು ಕಿಡಿ.



ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿರುವ ನಟ ಚೇತನ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಸಾರಿಗೆ ನೌಕರರ ಬೇಡಿಕೆ ಇಂದು ನಿನ್ನೆಯದಲ್ಲ. 

16 ವರ್ಷಗಳಿಂದ ಬೇಡಿಕೆಯಿಟ್ಟು ಹೋರಾಟ ನಡೆಸುತ್ತಿದ್ದಾರೆ. 

ನೌಕರರ 8 ಬೇಡಿಕೆ ಈಡೇರಿಸಿದ್ದೇವೆ ಎಂಬ ಸರ್ಕಾರದ ಹೇಳಿಕೆ ಸುಳ್ಳು.

ಸರ್ಕಾರ ಕರ್ತವ್ಯಕ್ಕೆ ಹಾಜರಾಗದ ನೌಕರರನ್ನು ವಜಾ ಮಾಡುತ್ತಿದೆ. 

ಅನ್ಯಾಯದ ವಿರುದ್ಧ ಹೋರಾಟ ನಡೆಸಿದವರ ವಿರುದ್ಧ ಸರ್ಕಾರದ ಇಂಥ ದೋರಣೆ ಜನವಿರೋಧಿ'ಎಂದರು.



ಎಷ್ಟು ನೌಕರರನ್ನು ಜೈಲಿಗೆ 

ಹಾಕುತ್ತೀರಿ: ಸಿದ್ದು ಕಿಡಿ



ಎಸ್ಮಾ ಜಾರಿ ಮಾಡಿ ಎಷ್ಟು ಮಂದಿ ನೌಕರರನ್ನು ಜೈಲಿಗೆ ಹಾಕುತ್ತೀರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. 

ಬೆಳಗಾವಿಯ ಬೈಲಹೊಂಗಲದಲ್ಲಿ ಮಾತನಾಡಿ, ಕಳೆದ 4 ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಸಾರ್ವಜನಿಕರು ಬಸ್ ಇಲ್ಲದೆ ಪರದಾಡುತ್ತಿದ್ದಾರೆ.

 ಮುಷ್ಕರದ ನಡುವೆಯೂ ಓರ್ವ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರತಿಭಟನಾನಿರತರೊಂದಿಗೆ ಚರ್ಚಿಸಿ ಪರಿಹಾರ ಸೂಚಿಸುವುದನ್ನು ಬಿಟ್ಟು ಅವರನ್ನು ಹೆದರಿಸುತ್ತಿದ್ದೀರಾ ಎಂದು ಕಿಡಿಕಾರಿದ್ದಾರೆ.







Reactions

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು